ನವದೆಹಲಿ: ‘ಅತಿಯಾದ ತೆರಿಗೆ ವಿಧಿಸುವುದು ಎಂದರೆ, ಸರ್ಕಾರವೇ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ನಡೆದಂತೆ’ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಶುಕ್ರವಾರ ಹೇಳಿದ್ದಾರೆ.
ಆದಾಯ ತೆರಿಗೆ ಮೇಲ್ಮನವಿ ಪ್ರಾಧಿಕಾರದ 79ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ತೆರಿಗೆ ವಂಚಿಸುವುದೂ ನಾಗರಿಕರಿಗೆ ಶೋಭೆ ತರುವುದಿಲ್ಲ’ ಎಂದರು.