‘ಒಂದೆಡೆ ಸೈನಿಕರು ಉಗ್ರರ ವಿರುದ್ಧ ಹೋರಾಡುತ್ತಿದ್ದರು. ಆಗ ದೇಶವು ಒಗ್ಗಟ್ಟಿನಿಂದ ನಿಲ್ಲಬೇಕಿತ್ತು. ಆದರೆ ಈ 21 ವಿರೋಧ ಪಕ್ಷಗಳು ದೆಹಲಿಯಲ್ಲಿ ಗುಂಪುಗೂಡಿ, ನಮ್ಮ ಕ್ರಮಗಳನ್ನು ಖಂಡಿಸುತ್ತಿದ್ದವು. ಸೇನಾಪಡೆಗಳ ಕಾರ್ಯಾಚರಣೆಯ ಸಾಕ್ಷ್ಯ ಕೇಳುತ್ತಿದ್ದವು. ಈ ಹಿಂದೆ ನಿರ್ದಿಷ್ಟ ದಾಳಿ ನಡೆಸಿದಾಗಲೂ ಈ ಪಕ್ಷಗಳು ಹೀಗೆಯೇ ಸಾಕ್ಷ್ಯ ಕೇಳಿದ್ದವು’ ಎಂದು ಮೋದಿ ಹರಿಹಾಯ್ದರು.