ಕಾಶ್ಮೀರದಲ್ಲಿ ಶುಕ್ರವಾರ ನಡೆದ ಕಲ್ಲು ತೂರಾಟದಲ್ಲಿ ಯೋಧನೊಬ್ಬ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಅವರು ಈ ಪ್ರತಿಕ್ರಿಯೆ ನೀಡಿದ್ದು, ‘ಗಡಿ ಉಲ್ಲಂಘನೆ ಭಯೋತ್ಪಾದನೆಯನ್ನು ಪಾಕಿಸ್ತಾನ್ ಬೆಂಬಲಿಸುತ್ತಿದೆ’ ಎಂದು ಹೇಳಿದ್ದಾರೆ. ಅಲ್ಲದೆ, ಪಾಕಿಸ್ತಾನ ತನ್ನ ಚಾಳಿ ಮುಂದುವರಿಸಿದರೆ ‘ಬೇರೆ ಕ್ರಮ’ಗಳನ್ನೂ ಕೈಗೊಳ್ಳಬೇಕಾಗುತ್ತದೆ ಎಂದೂ ರಾವತ್ ಎಚ್ಚರಿಸಿದ್ದಾರೆ. ಆದರೆ, ಯಾವ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದನ್ನು ಅವರು ಹೇಳಲಿಲ್ಲ.