ಜಮ್ಮು: ಪೂಂಚ್ ಜಿಲ್ಲೆಯ ಶಾಹಪುರ್ ಮತ್ತು ಕೇರ್ಣಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತದ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ಸೇನೆ ತಿಳಿಸಿದೆ.
ಶನಿವಾರ ಸಂಜೆ 5.30ಕ್ಕೆ ಗುಂಡಿನ ದಾಳಿ ಆರಂಭಿಸಿದ ಪಾಕಿಸ್ತಾನದ ಪಡೆಗಳಿಗೆ ಭಾರತದ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ.ಭಾನುವಾರದ ಬೆಳಗಿನವರೆಗೂ ಗುಂಡಿನ ದಾಳಿ ನಡೆದಿದೆ.
ಪಾಕಿಸ್ತಾನದ ಕಡೆಗೆ ಸಂಭವಿಸಿದ ಸಾವು ನೋವಿನ ಮಾಹಿತಿ ತಕ್ಷಣಕ್ಕೆ ಗೊತ್ತಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗಿನ 4 ಗಂಟೆ ಸುಮಾರಿಗೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧರೊಬ್ಬರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು ಎಂದು ಅವರು ಹೇಳಿದ್ದಾರೆ.