ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೇಟ್ಲಿ ಸ್ಥಿತಿ ಗಂಭೀರ; ಆಸ್ಪತ್ರೆಗೆ ಗಣ್ಯರ ಭೇಟಿ

Last Updated 18 ಆಗಸ್ಟ್ 2019, 4:28 IST
ಅಕ್ಷರ ಗಾತ್ರ

ನವದೆಹಲಿ: ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಮುಖಂಡ, ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,ಅನೇಕ ಮುಖಂಡರು ಆಸ್ಪತ್ರೆಗೆ ಧಾವಿಸಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಅವರಿಗೆ ಜೀವರಕ್ಷಕ ಉಪಕರಣಗಳ ನೆರವು ನೀಡಲಾಗಿದ್ದು, ತಜ್ಞ ವೈದ್ಯರ ತಂಡವೊಂದು ಅವರ ಆರೋಗ್ಯ ಸ್ಥಿತಿಯನ್ನು ನೋಡಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ. ಜೇಟ್ಲಿ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯು ಈವರೆಗೆ ಯಾವುದೇ ಪ್ರಕಟಣೆಯನ್ನು ನೀಡಿಲ್ಲ.

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಸಚಿವರಾದ ಪೀಯೂಶ್‌ ಗೋಯಲ್‌, ಹರ್ಷವರ್ಧನ್‌, ಬಿಜೆಪಿ ಮುಖಂಡ ಸತೀಶ್‌ ಉಪಾಧ್ಯಾಯ, ಕಾಂಗ್ರೆಸ್‌ ನಾಯಕರಾದ ಅಭಿಷೇಕ್‌ ಸಿಂಘ್ವಿ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ, ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಆಸ್ಪತ್ರೆಗೆ ಭೇಟಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT