ನವದೆಹಲಿ:ದೆಹಲಿ ಹಿಂಸಾಚಾರದಲ್ಲಿ ಸಿಲುಕಿ ಸಾವಿಗೀಡಾಗಿದ್ದಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಕುಟುಂಬಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ₹1 ಕೋಟಿ ಘೋಷಣೆ ಮಾಡಿದ್ದಾರೆ. ಇದರ ಜತೆಗೆ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಭರವಸೆ ನೀಡಿದ್ದಾರೆ.
ಫೆ.26ರಂದು ಈಶಾನ್ಯ ದೆಹಲಿಯಜಾಫರ್ಬಾದ್ನ ಚರಂಡಿಯಲ್ಲಿ ಶರ್ಮಾ ಅವರ ಮೃತದೇಹ ಪತ್ತೆಯಾಗಿತ್ತು.
Delhi Chief Minister Arvind Kejriwal: We are announcing a compensation of Rs 1 crore for the family of Intelligence Bureau official Ankit Sharma and a member of their family will be given a job by Delhi Govt. #DelhiViolencepic.twitter.com/cSAShoKisD
ಶರ್ಮಾ ಅವರ ಅಪ್ಪ ರವೀಂದ್ರ ಶರ್ಮಾ ಕೇಂದ್ರ ಗುಪ್ತಚರವಿಭಾಗದ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಆಮ್ ಆದ್ಮಿ ಪಕ್ಷದ ನಾಯಕ ತಾಹೀರ್ ಹುಸೇನ್ ಬೆಂಬಲಿಗರು ಈ ಕೃತ್ಯವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.