ನರ್ಸ್ಗಳು, ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಪ್ರಾಣದ ಹಂಗು ತೊರೆದು ಧೈರ್ಯದಿಂದ ಕೋವಿಡ್–19 ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಸಂಕಷ್ಟ ಸ್ಥಿತಿಯಲ್ಲಿ ದೇಶ ಸೇವೆ ಮಾಡುವುದೇ ದೇಶಭಕ್ತಿಯ ನಿಜವಾದ ರೂಪ. ನಮ್ಮ ಸಮುದಾಯದ ಕಾರ್ಯಕರ್ತರು ನಿಜವಾದ ದೇಶಭಕ್ತರು. ಇಂತಹ ವಿಷಮ ಸ್ಥಿತಿಯಲ್ಲಿ ತಮ್ಮ ಸಮುದಾಯಗಳನ್ನು ಸುರಕ್ಷಿತವಾಗಿಡಲು ದಣಿವಿಲ್ಲದೆ ಶ್ರಮಿಸುತ್ತಿರುವವರೇನಮ್ಮ ನಾಯಕರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.