ಗುವಾಹಟಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ 17 ಜಿಲ್ಲೆಗಳಲ್ಲಿ 245 ದೇಶದ್ರೋಹ ಪ್ರಕರಣಗಳು ದಾಖಲಾಗಿವೆ ಎಂದು ಸರ್ಕಾರ ಸೋಮವಾರ ತಿಳಿಸಿದೆ.
ಅಸ್ಸಾಂನ ವಿಧಾನಸಭೆಯಲ್ಲಿ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಚಂದ್ರಮೋಹನ್ ಪಟೌರಿ, ದೇಶದ್ರೋಹ ಚಟುವಟಿಕೆ ನಡೆಸಿದ ವ್ಯಕ್ತಿಗಳು ಹಾಗೂ ಸಂಘಟನೆಗಳ ಮೇಲೆ ದೂರು ದಾಖಲಿಸಲಾಗಿದೆ ಎಂದರು.
ವಿರೋಧ ಪಕ್ಷದ ನಾಯಕ ದೇರ್ಬತಾ ಸಾಕಿಯಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉಲ್ಫಾ, ಎನ್ಡಿಎಫ್ಬಿ(ಎಸ್), ಎನ್ಡಿಎಫ್ಬಿ(ಬಿ) ಸೇರಿದಂತೆ ಹಲವು ಉಗ್ರಗಾಮಿ ಸಂಘಟನೆಗಳ ಮೇಲೆ ಪ್ರಕರಣ ದಾಖಲಾಗಿದೆ ಎಂದರು.