ವರ್ಮಾ ಮತ್ತು ಅಸ್ತಾನಾ ಅವರು ಪರಸ್ಪರರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಮಾಡಿದ್ದರು. ವರ್ಮಾ ಅವರು ಸಿಬಿಐ ಮುಖ್ಯಸ್ಥರಾಗಿದ್ದ ಅವಧಿಯಲ್ಲಿ ಅಸ್ತಾನಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಬಳಿಕ, ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿ ಎಂ. ನಾಗೇಶ್ವರ ರಾವ್ ಅವರನ್ನು ಸಿಬಿಐ ಮಧ್ಯಂತರ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಿಸಿತ್ತು.