ಬಸ್ ಮತ್ತು ಆಟೊ ಎರಡೂ ಬಾವಿಗೆ ಬಿದ್ದಿದ್ದು, ಘಟನೆಯಲ್ಲಿ 18 ಜನರಿಗೆ ತೀವ್ರ ಗಾಯಗಳಾಗಿವೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ. ಮೃತಪಟ್ಟವರಲ್ಲಿ ಏಳು ವರ್ಷದ ಬಾಲಕಿಯೂ ಸೇರಿದ್ದಾಳೆ. ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.