ನಾವು ಪರಿಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ನಿಗಾವಹಿಸಿದ್ದೇವೆ. ಚಂಡಮಾರುತ ತೀವ್ರ ಪರಿಣಾಮ ಉಂಟುಮಾಡುವ ಪ್ರದೇಶಗಳಲ್ಲಿನ ಮಕ್ಕಳುಮತ್ತು ಅವರ ಕುಟುಂಬಗಳ ಸುರಕ್ಷತೆಗಾಗಿ ಕಾರ್ಯಪಡೆಗಳನ್ನು ರಚಿಸಿದ್ದೇವೆ. ವಿಪತ್ತು ನಿರ್ವಹಣಾ ಪಡೆ, ಆರೋಗ್ಯ ಅಧಿಕಾರಿಗಳೊಂದಿಗೂ ನಾವು ಸಂಪರ್ಕದಲ್ಲಿಇದ್ದೇವೆ ಎಂದು ಯುನಿಸೆಫ್ ದಕ್ಷಿಣ ಏಷ್ಯಾದ ಪ್ರಾದೇಶಿಕ ನಿರ್ದೇಶಕರಾದ ಜೀನ್ ಗೌಫ್ ಹೇಳಿದ್ದಾರೆ.