ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಯಾವೊಬ್ಬ ಬ್ರಾಹ್ಮಣರಿಗೂ ಟಿಕೆಟ್ ಸಿಕ್ಕಿಲ್ಲ: ಕೃಷ್ಣಾಜಿ ಕುಲಕರ್ಣಿ ಅಸಮಾಧಾನ

Last Updated 16 ಏಪ್ರಿಲ್ 2018, 11:53 IST
ಅಕ್ಷರ ಗಾತ್ರ

ಕಲಬುರ್ಗಿ: ಕಲಬುರ್ಗಿ ದಕ್ಷಿಣ ಮತ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕೃಷ್ಣಾಜಿ ಕುಲಕರ್ಣಿ ಟಿಕೆಟ್ ‌ಸಿಗದಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ.

‘26 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ದುಡಿಯುತ್ತಿದ್ದೇನೆ. ಆದರೂ ಟಿಕೆಟ್ ಸಿಗದಿರುವದು ಬೇಸರವಾಗಿದೆ. ನಿಷ್ಠಾವಂತ ಕಾರ್ಯಕರ್ತರಿಗೆ ಬೆಲೆ ಇಲ್ಲದಂತಾಗಿದೆ. ನಾಳೆ ನಮ್ಮ ಸಮಾಜದವರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಯಾವೊಬ್ಬ ಬ್ರಾಹ್ಮಣರಿಗೂ ಟಿಕೆಟ್ ಸಿಕ್ಕಿಲ್ಲ. ಇದರಿಂದ ಸಮಾಜಕ್ಕೆ ಅನ್ಯಾಯವಾದಂತಾಗಿದೆ ಎಂದರು.

* ಲಿಂಗಸುಗೂರು ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಅಸ್ಪೃಶ್ಯ ಜಾತಿ ಮುಖಂಡರಿಗೆ ಕಾಂಗ್ರೆಸ್ ಟಿಕೆಟ್ ನೀಡದಿರುವುದನ್ನು ವಿರೋಧಿಸಿ ವಿವಿಧ ದಲಿತಪರ ಸಂಘಟನೆಗಳು ಲಿಂಗಸುಗೂರು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿವೆ.

ಬಳ್ಳಾರಿ: ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದಕ್ಕೆ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ ‌ಬೆಂಬಲಿಗರು ಸಿರುಗುಪ್ಪದಲ್ಲಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.

* ಹಾನಗಲ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಮನೋಹರ ತಹಶೀಲ್ದಾರ್ ಹಾಗೂ ಬೆಂಬಲಿಗರಿಂದ ಪ್ರತಿಭಟನೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT