ನವದೆಹಲಿ:ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮದಿನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್, ಗೃಹ ಸಚಿವ ಅಮಿತ್ ಶಾ, ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಸೇರಿದಂತೆ ಅನೇಕ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
ಮೋದಿ, ಕೋವಿಂದ್, ಶಾ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ‘ಸದೈವ್ ಅಟಲ್’ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದ್ದಾರೆ.
‘ಅಟಲ್ಜೀಯವರ ಜನ್ಮ ದಿನದ ಸಂದರ್ಭದಲ್ಲಿ ವಿನೀತನಾಗಿಅವರನ್ನು ನೆನಪಿಸಿಕೊಳ್ಳುತ್ತಿದ್ದೇನೆ ಮತ್ತು ಗೌರವಾರ್ಪಣೆ ಮಾಡುತ್ತಿದ್ದೇನೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಜತೆಗೆ, ಅಟಲ್ ಅವರ ಸಾಧನೆಗಳನ್ನು ಉಲ್ಲೇಖಿಸಿ ಕೊಂಡಾಡಿದ್ದಾರೆ.
पूर्व प्रधानमंत्री अटल बिहारी वाजपेयी जी आज़ाद भारत के उन महान राजनेताओं में थे जिन्होंने देश की राजनीति के साथ-साथ राजनय को भी नई दिशा और नई ऊँचाई देने में क़ामयाबी हासिल की।
वे आजीवन ‘अटल और अविचल’ रहे। अटलजी की जयंती के अवसर पर मैं उन्हें श्रद्धापूर्वक स्मरण एवं नमन करता हूँ।
ಕೇಂದ್ರ ಸಚಿವರಾದ ರವಿಶಂಕರ್ ಪ್ರಸಾದ್, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ ಸೇರಿ ಅನೇಕರು ಟ್ವೀಟ್ ಮೂಲಕ ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದ್ದಾರೆ.
ವಾಜಪೇಯಿಯವರ ರಾಜಕೀಯ ಜೀವನದಲ್ಲಿ ಮಹತ್ವದ ಪಾತ್ರ ವಹಿಸಿದ್ದು ಲಖನೌ ಲೋಕಸಭಾ ಕ್ಷೇತ್ರ. ಈ ಹಿನ್ನೆಲೆಯಲ್ಲಿ ಲಖನೌ ಲೋಕಭವನದಲ್ಲಿ ಸ್ಥಾಪಿಸಲಾಗಿರುವ ವಾಜಪೇಯಿ ಅವರ ಕಂಚಿನ ಪ್ರತಿಮೆಯನ್ನು ಮೋದಿಯವರು ಇಂದು ಅನಾವರಣಗೊಳಿಸಲಿದ್ದಾರೆ. ಜತೆಗೆ,ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ.