ತಿರುವನಂತಪುರ: ಶಬರಿಮಲೆ ದೇವಸ್ಥಾನದೊಳಗೆ ಮಹಿಳೆಯರ ಪ್ರವೇಶಕ್ಕೆ ಬೆಂಬಲ ನೀಡಿದ್ದ ಸ್ವಾಮಿ ಸಂದೀಪಾನಂದ ಗಿರಿ ಅವರ ಆಶ್ರಮದ ಮೇಲೆ ಶನಿವಾರ ಬೆಳಗಿನ ಜಾವ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳ ಗುಂಪು ಬೆಂಕಿ ಹಚ್ಚಿ ಪರಾರಿಯಾಗಿದೆ.
ಆಶ್ರಮದಲ್ಲಿದ್ದ ಎರಡು ಕಾರು ಮತ್ತು ಎರಡು ಸ್ಕೂಟರ್ ಬೆಂಕಿಗಾಹುತಿಯಾಗಿವೆ. ಆಶ್ರಮಕ್ಕೆ ಭೇಟಿ ನೀಡಿ ಪರಿಶೀಲಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಸಚಿವೆ ಕೆ.ಕೆ. ಶೈಲಜಾ ಅವರು ಕೃತ್ಯವನ್ನು ಖಂಡಿಸಿದ್ದಾರೆ.