ಲಖನೌ: ವಲಸೆ ಕಾರ್ಮಿಕರಿಗೆ ಬಸ್ ವ್ಯವಸ್ಥೆ ಮಾಡಿಕೊಡಲು ವಿಫಲವಾದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಔರೇಯಾ ಎಂಬಲ್ಲಿ ಟ್ರಕ್ಗಳು ಡಿಕ್ಕಿಯಾಗಿ 24 ವಲಸೆ ಕಾರ್ಮಿಕರು ಮೃತಪಟ್ಟ ಬಗ್ಗೆ ಉಲ್ಲೇಖಿಸಿದ ಅವರು, ಸರ್ಕಾರ ಎಲ್ಲವನ್ನೂ ಮರೆತಿದೆ ಎಂದು ಟೀಕಿಸಿದ್ದಾರೆ.