ಔರೆಯಾ : ಉತ್ತರ ಪ್ರದೇಶದ ಔರೆಯಾ ಸಮೀಪಎರಡು ಲಾರಿಗಳ ನಡುವೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಸತ್ತವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ.
ಎರಡೂ ವಾಹನಗಳು ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದವು. ಎರಡು ವಾಹನಗಳ ಚಾಲಕರು, ಮಾಲೀಕರು ಮತ್ತು ಸಾಗಣೆದಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ದುರಂತದಲ್ಲಿ 34 ಮಂದಿ ಗಾಯಗೊಂಡಿದ್ದರು. ಗಾಯಗೊಂಡವರನ್ನುಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ದಾಖಲಿಸಲಾಗಿದೆ.
‘ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಏಳು ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಇನ್ನುಳಿದವರಿಗೆಚಿಕಿತ್ಸೆ ನೀಡಲಾಗುತ್ತಿದ್ದು, ಅವರನ್ನು ಶೀಘ್ರ ಬಿಡುಗಡೆ ಮಾಡಲಾಗುವುದು’ ಎಂದು ವೈದ್ಯ ರಾಜ್ ಕುಮಾರ್ ತಿಳಿಸಿದ್ದಾರೆ.
‘ವಾಹನಗಳಲ್ಲಿ ತುಂಬಲಾಗಿದ್ದ ಸುಣ್ಣದ ಪುಡಿಯ ಚೀಲಗಳ ಮೇಲೆ ಬಹುತೇಕ ಕಾರ್ಮಿಕರು ಕುಳಿತಿದ್ದರು. ವಾಹನ ಮಗುಚಿ ಬಿದ್ದಾಗ ಈ ಚೀಲಗಳು ಅವರಮೇಲೆ ಬಿದ್ದಿದ್ದು, ಹಲವರು ಸಾವಿಗೀಡಾಗಿದ್ದಾರೆ.ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ತಿಳಿಸಿದ್ದಾರೆ.