‘ಗುಂಡಿಗೆ ಸಿಲುಕುವ ಮುನ್ನ ಹುಲಿಯು ರಸ್ತೆ ಮತ್ತು ವಾಹನಗಳಿಂದ ದೂರ ಸರಿಯುತ್ತಿತ್ತು. ಹುಲಿ ಚಲಿಸುತ್ತಿದ್ದ ದಿಕ್ಕಿನಲ್ಲೇ ಚುಚ್ಚುಮದ್ದು ಹಾರಿಸಲಾಗಿದೆ. ಇದು ಹುಲಿಯು ಹೊಂಚುಹಾಕಿರಲಿಲ್ಲ ಮತ್ತು ದಾಳಿಗೆ ಮುಂದಾಗಿರಲಿಲ್ಲ ಎಂಬುದನ್ನು ಸೂಚಿಸುತ್ತದೆ. ಅಲ್ಲದೆ ಆ ಸಂದರ್ಭದಲ್ಲಿ ಹುಲಿ ಅತ್ಯಂತ ಸಹಜವಾಗಿ ವರ್ತಿಸಿದೆ. ಅದನ್ನು ತಪ್ಪಾಗಿ ಅರ್ಥೈಸಿಕೊಂಡ ಅನನುಭವಿ ಅಸ್ಗರ್ ಅಲಿ ಖಾನ್ ಗುಂಡು ಹಾರಿಸಿದ್ದಾರೆ’ ಎಂದು ವರದಿಯಲ್ಲಿ ವಿವರಿಸಲಾಗಿದೆ.