ಯಾವುದೇ ದೇವಸ್ಥಾನ ಅಥವಾ ಪೂಜಾಸ್ಥಳವನ್ನು ಧ್ವಂಸ ಮಾಡಿ ಬಾಬರಿ ಮಸೀದಿ ನಿರ್ಮಾಣ ಆಗಿಲ್ಲ ಎಂಬ ಚಾರಿತ್ರಿಕ ಸತ್ಯ ಮತ್ತು ಸಾಕ್ಷ್ಯಗಳ ಆಧಾರದಲ್ಲಿ ಮುಸ್ಲಿಮರು ತಮ್ಮ ಹಕ್ಕು ಮಂಡಿಸಿದ್ದಾರೆ. ತೀರ್ಪು ಏನೇ ಬರಲಿ, ಎಲ್ಲರೂ ಅದನ್ನು ಗೌರವಿಸಬೇಕು ಎಂದು ಸಂಘಟನೆಯ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಅವರು ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.