ಲಖನೌ: ಅಯೋಧ್ಯೆಯ ವಿವಾದಾತ್ಮಕ ನಿವೇಶನ ಪ್ರಕರಣದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್ನ ಸಂವಿಧಾನ ಪೀಠವು, ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ ಐದು ಎಕರೆ ಜಮೀನು ನೀಡಲು ಶನಿವಾರ ಆದೇಶಿಸಿದೆ. ಆದರೆ, ಜಮೀನು ಸ್ವೀಕರಿಸಬೇಕೇ ಎಂಬುದನ್ನು ಇದೇ 26ರಂದು ನಡೆಯುವ ಸಭೆಯಲ್ಲಿ ನಿರ್ಧರಿಸುವುದಾಗಿ ಉತ್ತರ ಪ್ರದೇಶದ ಕೇಂದ್ರ ವಕ್ಫ್ ಮಂಡಳಿ ಭಾನುವಾರ ತಿಳಿಸಿದೆ.