ವಿವಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಉತ್ತರ ಪ್ರದೇಶ ಸರ್ಕಾರ ಭಾಷಾಂತರ ಮಾಡಿಸಿದೆ. ಈ ಪ್ರಕರಣದಲ್ಲಿ ಕೋರ್ಟ್ ಮೆಟ್ಟಿಲೇರಿರುವ ಹಿಂದೂ ಹಾಗೂ ಮುಸ್ಲಿಂ ಸಂಘಟನೆಗಳು ಭಾಷಾಂತರ ಮಾಡಲಾದ ದಾಖಲೆಗಳ ಸತ್ಯಾಸತ್ಯತೆ ಬಗ್ಗೆ ವಾಗ್ವಾದಕ್ಕಿಳಿದವು. ಆಗ, ವಿವಾದವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ನ್ಯಾಯಮೂರ್ತಿ ಬೊಬ್ಡೆ ಸಲಹೆ ನೀಡಿದ್ದರು.