ಈ ವ್ಯಾಜ್ಯದ ಇತ್ಯರ್ಥಕ್ಕೆನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಐ. ಕಲೀಫುಲ್ಲಾ, ಧಾರ್ಮಿಕ ಗುರು ಶ್ರೀ ಶ್ರೀ ರವಿಶಂಕರ್ ಮತ್ತು ಸಂಧಾನ ಪರಿಣಿತ ವಕೀಲ ಶ್ರೀರಾಮ್ ಪಂಚು ಅವರ ಸಂಧಾನ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಿತ್ತು. ಈ ಸಮಿತಿಯ ಮುಖ್ಯಸ್ಥರಾದ ಕಲೀಫುಲ್ಲಾ ಅವರು ಮೇ 7ರಂದೇ ಮಧ್ಯಂತರ ವರದಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದರು.