‘ಪ್ರಧಾನಿ ಮೋದಿ ಕಳ್ಳ ಎಂಬುದನ್ನು ಸುಪ್ರೀಂ ಕೋರ್ಟ್ ಸಹ ಹೇಳಿದೆ’ ಎಂದು ಕೋರ್ಟ್ ಆದೇಶವನ್ನು ತಪ್ಪಾಗಿ ಉಲ್ಲೇಖಿಸಿ ರಾಹುಲ್ ಗಾಂಧಿ ಅವರು ಹೇಳಿಕೆ ನೀಡಿದ್ದನ್ನು ಕುರಿತ ಪ್ರಕರಣವೂ ವಿಚಾರಣೆಗೆ ಬರಲಿದೆ. ಈ ಬಗ್ಗೆ ಬಿಜೆಪಿಯ ಸಂಸದೆ ಮೀನಾಕ್ಷಿ ಲೇಖಿ ಅವರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು. ಈಗಾಗಲೇ ಕ್ಷಮೆ ಕೋರಿರುವ ರಾಹುಲ್, ಪ್ರಕರಣ ಮುಕ್ತಾಯಗೊಳಿಸಲು ಮನವಿ ಮಾಡಿದ್ದಾರೆ.