ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲ ಕ್ರೋಡೀಕರಿಸಲು ವಿಶ್ವ ಹಿಂದೂ ಪರಿಷತ್ (ಪಿಟಿಐ) ಪ್ರಾಯೋಜಿಸಿದ ಧರ್ಮ ಸಭೆ ಕೆಲವೇ ದಿನಗಳ ಹಿಂದೆ ನಡೆದಿತ್ತು. ಡಿಸೆಂಬರ್ 6ರಂದು ಶೌರ್ಯ ದಿನ ಆಚರಣೆಗೆ ಹಿಂದೂ ಬಲಪಂಥೀಯ ಸಂಘಟನೆಗಳು ನಿರ್ಧರಿಸಿವೆ. ಇದೇ 18ರಂದು ಗೀತಾ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರ್ಜುನನಿಗೆ ಕೃಷ್ಣ ಗೀತೆಯನ್ನು ಬೋಧಿಸಿದ ದಿನವನ್ನು ಗೀತಾ ಜಯಂತಿ ಎಂದು ಆಚರಿಸಲಾಗುತ್ತಿದೆ.