ಜೈಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾದಮೂರೂವರೆ ವರ್ಷದೊಳಗೆ ದೇವಾಲಯ ಉದ್ಘಾಟನೆಗೊಳ್ಳಲಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಖಜಾಂಚಿ ಗೋವಿಂದ ದೇವ ಗಿರಿಜೀ ಮಹಾರಾಜ್ ಹೇಳಿದ್ದಾರೆ.
ಭಕ್ತರ ಧನ ಸಹಾಯದಿಂದ ನಿರ್ಮಾಣ ಕಾರ್ಯ ಆದಷ್ಟು ಬೇಗವೇ ಪೂರ್ಣಗೊಳ್ಳಲಿದೆ. ಅಕ್ಷರಧಾಮ ದೇವಾಲಯವನ್ನು ಮೂರು ವರ್ಷಗಳಲ್ಲಿ ನಿರ್ಮಾಣ ಮಾಡಿದಂತೆಯೇ ಶ್ರೀರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.