ಅಯೋಧ್ಯೆ ತೀರ್ಪು: ಸುಪ್ರೀಂ ಕೋರ್ಟ್ ಆದೇಶದ ಮುಖ್ಯಾಂಶಗಳು

ಅಯೋಧ್ಯೆ ತೀರ್ಪಿನ ಮುಖ್ಯಾಂಶಗಳು
* ಟ್ರಸ್ಟ್ ರಚಿಸಲು, ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮತ್ತು ಮಸೀದಿಗೆ ಪರ್ಯಾಯ ಭೂಮಿ ನೀಡಲು ಸರ್ಕಾರಕ್ಕೆ 3–4 ತಿಂಗಳ ಗಡುವು ವಿಧಿಸಿದ ಸುಪ್ರೀಂ ಕೋರ್ಟ್
* ಮಂದಿರ ನಿರ್ಮಾಣ ಹೊಣೆ ಸರ್ಕಾರಕ್ಕೆ, ನಿರ್ವಹಣೆ ಹೊಣೆ ಟ್ರಸ್ಟ್ಗೆ ನೀಡುವಂತೆ ಸರ್ಕಾರಕ್ಕೆ ಆದೇಶ
ಇದನ್ನೂ ಓದಿ: ಅಯೋಧ್ಯೆ ತೀರ್ಪು: ವಿವಾದಿತ ಭೂಮಿ ರಾಮಮಂದಿರಕ್ಕೆ, ಮಸೀದಿಗೆ ಪರ್ಯಾಯ ಜಮೀನು
* ಸುನ್ನಿ ವಕ್ಫ್ ಬೋರ್ಡ್ಗೆ ಮಸೀದಿ ನಿರ್ಮಾಣಕ್ಕೆ ಬೇರೆಡೆ ಪ್ರತ್ಯೇಕ 5 ಎಕರೆ ಭೂಮಿ ನೀಡುವಂತೆ ಸರ್ಕಾರಕ್ಕೆ ಆದೇಶ
* ವಿವಾದಿತ ಜಮೀನು ರಾಮಲಲ್ಲಾಗೆ ಸೇರಿದ್ದು, ಮಂದಿರ ನಿರ್ಮಾಣಕ್ಕೆ ನಿಯಮ ರೂಪಿಸಿ ಎಂದ ಸುಪ್ರೀಂ ಕೋರ್ಟ್
ಇದನ್ನೂ ಓದಿ: Time Line: ಅಯೋಧ್ಯೆ ಧ್ವಂಸ ಪ್ರಕರಣ ವ್ಯಾಜ್ಯಕ್ಕೆ ಒಂದೂವರೆ ಶತಮಾನ
* ವಿವಾದಿತ ಜಾಗವನ್ನು ಮೂರು ಭಾಗ ಮಾಡಿದ್ದಕ್ಕೆ ಎಲ್ಲೆಡೆಯಿಂದಲೂ ವಿರೋಧವಿದೆ
* ಮಸೀದಿಗೆ ಹಾನಿ ಮಾಡಿದ್ದು, ಕಾನೂನು ಕೈಗೆ ತೆಗೆದುಕೊಂಡಿದ್ದೂ ಸರಿಯಲ್ಲ
* ಬಾಬರಿ ಮಸೀದಿಯನ್ನು ಖಾಲಿ ಜಮೀನಿನಲ್ಲಿ ನಿರ್ಮಿಸಿದ್ದಲ್ಲ ಅಲ್ಲಿ ದೊಡ್ಡ ಕಟ್ಟಡವಿತ್ತು, ಆ ಕಟ್ಟಡವು ಇಸ್ಲಾಮಿಕ್ ಮೂಲದ್ದಲ್ಲ ಅಂತ ಪುರಾತತ್ವ ಇಲಾಖೆ ಹೇಳಿದೆ. ಬಾಬರಿ ಕಟ್ಟಡದ ಅಡಿಯಲ್ಲಿ ಇಸ್ಲಾಮೇತರ ಕಟ್ಟಡದ ಅವಶೇಷವಿತ್ತು. ಮಂದಿರವನ್ನು ಧ್ವಂಸ ಮಾಡಿರುವ ಬಗ್ಗೆ ಯಾವುದೇ ಸ್ಪಷ್ಟನೆ ಇಲ್ಲ.
* ಹಿಂದೂಗಳು ಅಯೋಧ್ಯೆಯನ್ನು ರಾಮನ ಜನ್ಮಸ್ಥಾನ ಅಂತ ನಂಬಿದ್ದಾರೆ, ಈ ವಿಚಾರದಲ್ಲಿ ಅವರಿಗೆ ಧಾರ್ಮಿಕ ಭಾವನೆಗಳಿವೆ. ಮುಸ್ಲಿಮರು ಆ ಜಾಗ ಬಾಬ್ರಿ ಮಸೀದಿಯದ್ದು ಅಂತಾರೆ. ಆದರೆ ರಾಮ ಅಲ್ಲಿ ಜನಿಸಿದ್ದ ಎಂಬ ಹಿಂದುಗಳ ನಂಬಿಕೆ ವಿವಾದರಹಿತವಾದದ್ದು
* ಪುರಾತತ್ವ ಇಲಾಖೆಯ ಶೋಧನೆಯನ್ನು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ
* ರಾಮ ಅಲ್ಲಿಯೇ ಜನಿಸಿದ ಎಂಬುದು ಹಿಂದುಗಳ ನಂಬಿಕೆ. ನಂಬಿಕೆಯು ವೈಯಕ್ತಿಕ ವಿಷಯ
* ಹಿಂದುಗಳು ಅಯೋಧ್ಯೆಯನ್ನು ರಾಮಜನ್ಮಭೂಮಿ ಅಂತ ಒಪ್ಪಿಕೊಂಡಿರುವುದಲ್ಲಿ ಯಾವುದೇ ವಿವಾದ ಇಲ್ಲ
* ಬಾಬ್ರಿ ಮಸೀದಿಯನ್ನು ಖಾಲಿ ಜಾಗದಲ್ಲಿ ನಿರ್ಮಿಸಲಾಗಿಲ್ಲ, ವಿವಾದಿತ ಕಟ್ಟಡ ಇಸ್ಲಾಮಿಕ್ ಸಂರಚನೆ ಹೊಂದಿಲ್ಲ
* ನಿರ್ಮೋಹಿ ಅಖಾಡದ ಅರ್ಜಿ ವಜಾ, ರಾಮಲಲ್ಲಾ ಮುಖ್ಯ ಅರ್ಜಿದಾರ ಎಂದು ಮಾನ್ಯ ಮಾಡಿದ ಸುಪ್ರೀಂ ಕೋರ್ಟ್
ಐವರು ಸದಸ್ಯರ ಸಾಂವಿಧಾನಿಕ ಪೀಠದಲ್ಲಿರುವವರು: ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್ ಎ ಬೊಬ್ಡೆ, ಡಿ.ವೈ.ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ್
ಇನ್ನಷ್ಟು...
ಅಯೋಧ್ಯೆ ತೀರ್ಪು ಬರೆದ ಐವರು ನ್ಯಾಯಮೂರ್ತಿಗಳು ಇವರು
ಅಯೋಧ್ಯೆ ತೀರ್ಪು ಶನಿವಾರವೇ ಪ್ರಕಟ ಯಾಕೆ?
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.