ಒಟ್ಟು2.77 ಎಕರೆ ಜಾಗವು ತಮಗೆ ಸೇರಿದ್ದು ಎಂದು ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾಡ ಮತ್ತು ರಾಮಲಲ್ಲಾ ಸಂಘಟನೆಗಳು ವಾದಿಸಿದವು. ಆ ಜಾಗದಲ್ಲಿ ದೇಗುಲವನ್ನು ನಾಶಪಡಿಸಿ ಮಸೀದಿ ನಿರ್ಮಿಸಲಾಗಿದೆ. ಅಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎಂದು ಹಿಂದು ಸಂಘಟನೆಗಳ ವಕೀಲರು ವಾದಿಸಿದ್ದರು. ಆದರೆ,ದೇವಾಲಯವನ್ನು ಧ್ವಂಸ ಮಾಡಿ ಮಸೀದಿ ನಿರ್ಮಿಸಲಾಗಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯ ಇಲ್ಲ ಎಂದು ಪ್ರಕರಣದ ಮುಸ್ಲಿಂ ಕಕ್ಷಿದಾರರು ವಾದಿಸಿದ್ದರು.