<p><strong>ಶ್ರೀನಗರ:</strong> ‘ರಾಜ್ಯ ಸ್ಥಾನಮಾನ ಹೊಂದಿದ್ದ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸಿದ್ದು ರಾಜ್ಯದ ಜನತೆಗೆ ಮಾಡಿದ ಅಪಮಾನ’ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಪರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸರ್ಕಾರ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನವನ್ನು ರದ್ದು<br />ಪಡಿಸಿ ಜಮ್ಮು ಮತ್ತು ಕಾಶ್ಮೀರವನ್ನು ಮತ್ತೆ ರಾಜ್ಯವೆಂದು ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>‘ನೀವು ಯಾವ ಬಗೆಯ ತೊಂದರೆಯನ್ನು ಅನುಭವಿಸಿದ್ದೀರಿ ಎಂಬುದು ನನಗೆ ತಿಳಿದಿದೆ ಎಂದು ಅಬ್ದುಲ್ಲಾ ಅವರತ್ತ ನೋಡಿದ ಆಜಾದ್,ಅಬ್ದುಲ್ಲಾ ಅವರ ವಯಸ್ಸು ಮತ್ತು ಆರೋಗ್ಯದ ದೃಷ್ಟಿಯಿಂದ ಅವರನ್ನು ಸರ್ಕಾರ ಗೃಹಬಂಧನದಲ್ಲಿ ಇರಿಸಿದ್ದು ಅತಿ ಎನಿಸುವ ನಿರ್ಧಾರವಾಗಿತ್ತು’ ಎಂದು ಅವರು ಆರೋಪಿಸಿದರು.</p>.<p>‘ಫಾರೂಕ್ ಅವರನ್ನು ಗೃಹ ಬಂಧನದಲ್ಲಿ ಇರಿಸಿದ್ದು ಯಾಕೆಂಬುದು ಅವರ ಬಿಡುಗಡೆಯ ನಂತರವೂ ತಿಳಿದಿಲ್ಲ.ಕಾನೂನು ಉಲ್ಲಂಘಿಸುವ ಹಾಗೂ ರಾಷ್ಟ್ರವಿರೋಧಿ ಕೃತ್ಯದಲ್ಲಿ ತೊಡಗಿರುವವರನ್ನು ಬಂಧನದಲ್ಲಿ ಇಡುವುದು ಸರಿ.ಆದರೆ ಸಂವಿಧಾನದ370ನೇ ವಿಧಿ ರದ್ದುಗೊಳಿಸಿದ ನಂತರ ಪಕ್ಷಾತೀತವಾಗಿ ಎಲ್ಲ ನಾಯಕರನ್ನು ಬಂಧನದಲ್ಲಿ ಇಟ್ಟಿದ್ದು ಸರಿಯಲ್ಲ’ ಎಂದು ಹೇಳಿದರು.</p>.<p>‘ಜಮ್ಮು ಮತ್ತು ಕಾಶ್ಮೀರ ಪ್ರಗತಿ ಸಾಧಿಸಬೇಕಾದರೆ ಬಂಧನದಲ್ಲಿರುವ ಎಲ್ಲ ರಾಜಕೀಯ ನಾಯಕರನ್ನು ಬಿಡುಗಡೆಗೊಳಿಸಬೇಕು.<br />ಕಣಿವೆ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಪ್ರಾರಂಭವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.ಸರಿಯಾದ ಕಾರ್ಯವಿಧಾನ ಅನುಸರಿಸಿಚುನಾವಣೆಗಳನ್ನು ನಡೆಸಬೇಕು’ ಎಂದು ಒತ್ತಾಯಿಸಿದರು.</p>.<p>ಮಗನ ಭೇಟಿ ಮಾಡಿದ ಫಾರೂಕ್:ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಗೃಹಬಂಧನದಿಂದ ಬಿಡುಗಡೆಯಾದ ನಂತರ ಶನಿವಾರ ಮೊದಲ ಬಾರಿಗೆ ತಮ್ಮ ಮಗ ಒಮರ್ ಅಬ್ದುಲ್ಲಾ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.</p>.<p>ತಮ್ಮ ನಿವಾಸದ ಬಳಿ ಜೈಲಿನಂತೆ ಮಾರ್ಪಡಿಸಲಾಗಿರುವ ಒಮರ್ ಅವರ ಹರಿನಿವಾಸಕ್ಕೆ ಭೇಟಿ ನೀಡಿದ ಫಾರೂಕ್ ಅಬ್ದುಲ್ಲಾ,ಒಂದು ಗಂಟೆಯವರೆಗೆ ಮಗನೊಂದಿಗೆ ಕಾಲ ಕಳೆದರು.</p>.<p>ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧನದಲ್ಲಿ ಇರಿಸಲಾಗಿರುವ ಒಮರ್ ಅವರ ಭೇಟಿಗೆ ಅವಕಾಶ ನೀಡುವಂತೆ ಜಮ್ಮು ಮತ್ತು ಕಾಶ್ಮೀರದ ಆಡಳಿತಕ್ಕೆ ಫಾರೂಕ್ ಅಬ್ದುಲ್ಲಾ ಮನವಿ ಸಲ್ಲಿಸಿದ್ದರು.ಮನವಿ ಪುರಸ್ಕರಿಸಿದ ಆಡಳಿತವು ಭೇಟಿಗೆ ಅವಕಾಶ ಕಲ್ಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ‘ರಾಜ್ಯ ಸ್ಥಾನಮಾನ ಹೊಂದಿದ್ದ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸಿದ್ದು ರಾಜ್ಯದ ಜನತೆಗೆ ಮಾಡಿದ ಅಪಮಾನ’ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಆರೋಪಿಸಿದರು.</p>.<p>ನಗರದಲ್ಲಿ ಶನಿವಾರ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಪರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸರ್ಕಾರ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನವನ್ನು ರದ್ದು<br />ಪಡಿಸಿ ಜಮ್ಮು ಮತ್ತು ಕಾಶ್ಮೀರವನ್ನು ಮತ್ತೆ ರಾಜ್ಯವೆಂದು ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>‘ನೀವು ಯಾವ ಬಗೆಯ ತೊಂದರೆಯನ್ನು ಅನುಭವಿಸಿದ್ದೀರಿ ಎಂಬುದು ನನಗೆ ತಿಳಿದಿದೆ ಎಂದು ಅಬ್ದುಲ್ಲಾ ಅವರತ್ತ ನೋಡಿದ ಆಜಾದ್,ಅಬ್ದುಲ್ಲಾ ಅವರ ವಯಸ್ಸು ಮತ್ತು ಆರೋಗ್ಯದ ದೃಷ್ಟಿಯಿಂದ ಅವರನ್ನು ಸರ್ಕಾರ ಗೃಹಬಂಧನದಲ್ಲಿ ಇರಿಸಿದ್ದು ಅತಿ ಎನಿಸುವ ನಿರ್ಧಾರವಾಗಿತ್ತು’ ಎಂದು ಅವರು ಆರೋಪಿಸಿದರು.</p>.<p>‘ಫಾರೂಕ್ ಅವರನ್ನು ಗೃಹ ಬಂಧನದಲ್ಲಿ ಇರಿಸಿದ್ದು ಯಾಕೆಂಬುದು ಅವರ ಬಿಡುಗಡೆಯ ನಂತರವೂ ತಿಳಿದಿಲ್ಲ.ಕಾನೂನು ಉಲ್ಲಂಘಿಸುವ ಹಾಗೂ ರಾಷ್ಟ್ರವಿರೋಧಿ ಕೃತ್ಯದಲ್ಲಿ ತೊಡಗಿರುವವರನ್ನು ಬಂಧನದಲ್ಲಿ ಇಡುವುದು ಸರಿ.ಆದರೆ ಸಂವಿಧಾನದ370ನೇ ವಿಧಿ ರದ್ದುಗೊಳಿಸಿದ ನಂತರ ಪಕ್ಷಾತೀತವಾಗಿ ಎಲ್ಲ ನಾಯಕರನ್ನು ಬಂಧನದಲ್ಲಿ ಇಟ್ಟಿದ್ದು ಸರಿಯಲ್ಲ’ ಎಂದು ಹೇಳಿದರು.</p>.<p>‘ಜಮ್ಮು ಮತ್ತು ಕಾಶ್ಮೀರ ಪ್ರಗತಿ ಸಾಧಿಸಬೇಕಾದರೆ ಬಂಧನದಲ್ಲಿರುವ ಎಲ್ಲ ರಾಜಕೀಯ ನಾಯಕರನ್ನು ಬಿಡುಗಡೆಗೊಳಿಸಬೇಕು.<br />ಕಣಿವೆ ಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಪ್ರಾರಂಭವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.ಸರಿಯಾದ ಕಾರ್ಯವಿಧಾನ ಅನುಸರಿಸಿಚುನಾವಣೆಗಳನ್ನು ನಡೆಸಬೇಕು’ ಎಂದು ಒತ್ತಾಯಿಸಿದರು.</p>.<p>ಮಗನ ಭೇಟಿ ಮಾಡಿದ ಫಾರೂಕ್:ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ಗೃಹಬಂಧನದಿಂದ ಬಿಡುಗಡೆಯಾದ ನಂತರ ಶನಿವಾರ ಮೊದಲ ಬಾರಿಗೆ ತಮ್ಮ ಮಗ ಒಮರ್ ಅಬ್ದುಲ್ಲಾ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.</p>.<p>ತಮ್ಮ ನಿವಾಸದ ಬಳಿ ಜೈಲಿನಂತೆ ಮಾರ್ಪಡಿಸಲಾಗಿರುವ ಒಮರ್ ಅವರ ಹರಿನಿವಾಸಕ್ಕೆ ಭೇಟಿ ನೀಡಿದ ಫಾರೂಕ್ ಅಬ್ದುಲ್ಲಾ,ಒಂದು ಗಂಟೆಯವರೆಗೆ ಮಗನೊಂದಿಗೆ ಕಾಲ ಕಳೆದರು.</p>.<p>ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧನದಲ್ಲಿ ಇರಿಸಲಾಗಿರುವ ಒಮರ್ ಅವರ ಭೇಟಿಗೆ ಅವಕಾಶ ನೀಡುವಂತೆ ಜಮ್ಮು ಮತ್ತು ಕಾಶ್ಮೀರದ ಆಡಳಿತಕ್ಕೆ ಫಾರೂಕ್ ಅಬ್ದುಲ್ಲಾ ಮನವಿ ಸಲ್ಲಿಸಿದ್ದರು.ಮನವಿ ಪುರಸ್ಕರಿಸಿದ ಆಡಳಿತವು ಭೇಟಿಗೆ ಅವಕಾಶ ಕಲ್ಪಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>