ರಾಂಪುರಕ್ಕೆ ಬಂದಾಗ ಅವರನ್ನು ಬಂಧಿಸುವಿರೋ ಅಥವಾ ಪೊಲೀಸರನ್ನು ಅವರಿದ್ದಲ್ಲಿಗೆ ಕಳುಹಿಸಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಟಿ, ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಬಗ್ಗೆಯೂ ರಾಂಪುರ ಠಾಣೆಯ ಪೊಲೀಸರು ದೂರು ದಾಖಲಿಸಿದ್ದರು. ಇದಲ್ಲದೆ ಆಜಂ ಅವರು ತಮ್ಮ ಕೃಷಿ ಭೂಮಿಯನ್ನು ಕಬಳಿಸಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ 25ಕ್ಕೂ ಹೆಚ್ಚು ರೈತರು ಇತ್ತೀಚೆಗೆ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು.