ನೀತಾ ಅಂಬಾನಿ ನೇತೃತ್ವದ ರಿಲಯನ್ಸ್ ಫೌಂಡೇಶನ್ ದೇಶಾದ್ಯಂತ ನಿರ್ಗತಿಕರಿಗೆ ಉಚಿತ ಊಟ ನೀಡುವುದಾಗಿ ಭರವಸೆ ನೀಡಿದೆ. ಇದಲ್ಲದೆ ಕೋವಿಡ್-19ನೊಂದಿಗೆ ಹೋರಾಡುವ ರೋಗಿಗಳಿಗೆ ಅಂಬಾನಿ ಸಂಪೂರ್ಣ ಆಸ್ಪತ್ರೆಯನ್ನು ಬಿಟ್ಟುಕೊಟ್ಟಿದ್ದಾರೆ.
ರತನ್ ಟಾಟಾ ಕೂಡ ಕೋವಿಡ್-19 ವಿರುದ್ಧ ಹೋರಾಡಲು ₹1,500 ಕೋಟಿ ನೀಡುವುದಾಗಿ ವಾಗ್ದಾನ ಮಾಡಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ಸರ್ಕಾರಕ್ಕೆ ನೆರವು ನೀಡುವುದಾಗಿ ತಿಳಿಸಿದ್ದಾರೆ.