ಭಾನುವಾರ ಹರಿದ್ವಾರದಲ್ಲಿ ನಡೆದಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಾಬಾ, ಮುಂದಿನ 50 ವರ್ಷಗಳಲ್ಲಿ ಭಾರತದ ಜನಸಂಖ್ಯೆ 150 ಕೋಟಿ ಮೀರಬಾರದು. ಜನಸಂಖ್ಯಾ ಹೆಚ್ಚಳವನ್ನು ಸಹಿಸಿಕೊಳ್ಳಲು ದೇಶಕ್ಕೆ ಸಾಧ್ಯವಾಗುವುದಿಲ್ಲ. ಕುಟುಂಬದಲ್ಲಿನ ಮೂರನೇ ಮಗುವಿಗೆ ಮತದಾನದ ಹಕ್ಕು ನಿಷೇಧಿಸಿ ಮತ್ತುಚುನಾವಣೆಯಲ್ಲಿ ಸ್ಪರ್ಧಿಸದಂತೆ ಇರುವ ಕಾನೂನನ್ನು ದೇಶದಲ್ಲಿ ಜಾರಿಗೆ ತರಬೇಕು.ಸರ್ಕಾರದ ಯಾವುದೇ ಸೌಲಭ್ಯಗಳು ಇವರಿಗೆ ದಕ್ಕದಂತೆ ಮಾಡಿದರೆ ಜನಸಂಖ್ಯೆಯನ್ನು ನಿಯಂತ್ರಿಸಬಹುದು ಎಂದಿದ್ದಾರೆ.