ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುದ್ವಾರ ದಾಳಿ ಖಂಡಿಸಿ ಬಜರಂಗದಳ, ದುರ್ಗಾವಾಹಿನಿ ಕಾರ್ಯಕರ್ತರಿಂದ ಪ್ರತಿಭಟನೆ

Last Updated 7 ಜನವರಿ 2020, 10:55 IST
ಅಕ್ಷರ ಗಾತ್ರ

ನವದೆಹಲಿ: ಜನವರಿ 3ರಂದು ನನಕಾನಾ ಸಾಹಿಬ್‌ ಗುರುದ್ವಾರದ ಮೇಲೆ ನಡೆದ ದಾಳಿ ಖಂಡಿಸಿ ಬಜರಂಗ ದಳ ಮತ್ತು ದುರ್ಗಾವಾಹಿನಿ ಕಾರ್ಯಕರ್ತರು ಮಂಗಳವಾರ ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆ ಮತ್ತು ಪ್ರತಿಭಟನಾಕಾರರ ನಡುವೆ ಜಟಾಪಟಿ ನಡೆದಿದ್ದು 10 ಮಂದಿ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಜನವರಿ 3ರಂದು ಪಾಕಿಸ್ತಾನದಲ್ಲಿರುವ ನನಕಾನಾ ಸಾಹಿಬ್‌ ಗುರುದ್ವಾರದ ಮೇಲೆ ಸ್ಥಳೀಯರು ಕಲ್ಲು ತೂರಾಟ ಮಾಡಿದ್ದರು. ಈ ದಾಳಿಗೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದ್ದು ಪಾಕಿಸ್ತಾನದಲ್ಲಿರುವ ಸಿಖ್ಖರಿಗೆ ರಕ್ಷಣೆ ನೀಡುವಂತೆ ಪಾಕ್ ಪ್ರಧಾನಿಗೆ ಮನವಿ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT