ಲಖನೌ:ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಟಿಎಂಸಿ ಶಾಸಕರು ಬಿಜೆಪಿಗೆ ಸೇರುತ್ತಾರೆ. ಈಗಾಗಲೇ ಟಿಎಂಸಿಯ ಶಾಸಕರ40 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.
ಮೋದಿಯವರ ಈ ಹೇಳಿಕೆಗೆ ಆಕ್ಷೇಪ ವ್ಯಕ್ತ ಪಡಿಸಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಈ ರೀತಿ ಭಾಷಣ ಮಾಡಿದ್ದಕ್ಕೆ ಮೋದಿಗೆ 72 ವರ್ಷಗಳ ಕಾಲ ನಿರ್ಬಂಧ ವಿಧಿಸಬೇಕು ಎಂದಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಮತ್ತು ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಸೇರಿದಂತೆ ಹಲವಾರು ನಾಯಕರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ 72 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆಚುನಾವಣಾ ಆಯೋಗವುನಿರ್ಬಂಧ ವಿಧಿಸಿತ್ತು.
ಮೋದಿ ವಿರುದ್ಧ ಟ್ವೀಟ್ ಕಿಡಿ ಕಾರಿರುವ ಅಖಿಲೇಶ್, ವಿಕಾಸ್ (ಅಭಿವೃದ್ಧಿ) ಕೇಳುತ್ತಿದೆ. ನೀವು ಪ್ರಧಾನಿಯವರ ಅವಮಾನಕರವಾದ ಭಾಷಣನ್ನು ಕೇಳಿದ್ದೀರಾ?. 125 ಕೋಟಿ ಭಾರತೀಯರ ನಂಬಿಕೆಯನ್ನು ಕಳೆದುಕೊಂಡ ನಂತರ ಮೋದಿ ಈಗ 40 ಶಾಸಕರು ಪಕ್ಷಾಂತರ ಮಾಡುತ್ತಿದ್ದಾರೆ ಎಂಬ ಭ್ರಮೆಯಲ್ಲಿದ್ದಾರೆ ಎಂದಿದ್ದಾರೆ.
‘विकास’ पूछ रहा है: प्रधान जी का शर्मनाक भाषण सुना क्या? “सवा सौ करोड़” देशवासियों का भरोसा खोकर अब वो बंगाल के 40 विधायकों के तथाकथित दल-बदल के अनैतिक भरोसे तक सिमट गये हैं. ये वो नहीं काले धन की मानसिकता बोल रही है.