<p><strong>ಮುಂಬೈ:</strong> ‘ಕೋವಿಡ್–19 ಪಿಡುಗಿನ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು. ಜೊತೆಗೆ, ಭಾರತ ವಿರೋಧಿ ಶಕ್ತಿಗಳು ಈ ಪರಿಸ್ಥಿತಿಯ ಲಾಭ ಪಡೆಯಲು ಹವಣಿಸುತ್ತಿರುವ ಬಗ್ಗೆ ಜನರು ಎಚ್ಚರದಿಂದ ಇರಬೇಕು’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.</p>.<p>ನಾಗಪುರದಲ್ಲಿರುವ ಸಂಘಟನೆಯ ಕೇಂದ್ರ ಕಚೇರಿಯಿಂದ ವೆಬ್ಕ್ಯಾಸ್ಟ್ ಮೂಲಕ ಮಾತನಾಡಿದ ಅವರು, ‘ಪ್ರಚೋದಿಸುವವರ ಸಂಖ್ಯೆಗೇನೂ ಕೊರತೆ ಇಲ್ಲ. ಇದು ಆಕ್ರೋಶ, ಆವೇಶಕ್ಕೆ ಕಾರಣವಾಗುತ್ತದೆ. ಅದರಿಂದ ಅಚಾತುರ್ಯಗಳು ನಡೆಯುತ್ತವೆ. ಇಂತಹ ಅವಕಾಶಗಳಿಗೆ ಕಾಯುತ್ತಿರುವವರು ಪರಿಸ್ಥಿತಿಯ ಲಾಭ ಪಡೆಯುತ್ತಾರೆ’ ಎಂದರು.</p>.<p>ಪಾಲ್ಘರ್ನಲ್ಲಿ ಇತ್ತೀಚೆಗೆ ಇಬ್ಬರು ಸಾಧುಗಳನ್ನು ಹತ್ಯೆ ಮಾಡಿದ ಘಟನೆಯನ್ನು ಪ್ರಸ್ತಾಪಿಸಿದ ಅವರು, ‘ಈ ಘಟನೆ ಬಗ್ಗೆ ಹಲವಾರು ಜನರು ಮಾತನಾಡುತ್ತಿದ್ದಾರೆ. ಇಂಥ ಘಟನೆ ಘಟಿಸಬೇಕಿತ್ತು ಎಂದೆನಿಸುತ್ತದೆಯೇ? ಆ ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲಿಸರು ಏನು ಮಾಡುತ್ತಿದ್ದರು’ ಎಂದು ಪ್ರಶ್ನಿಸಿದರು.</p>.<p>‘ಭಾರತ ನಿನ್ನನ್ನು ತುಂಡು ಮಾಡುತ್ತೇವೆ ಎಂದು ಹೇಳುತ್ತಿರುವ ವ್ಯಕ್ತಿಗಳು ಜನರನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ. ಇಂಥ ಜನರಿಗೆ ಸಮುದಾಯದ ಮುಖಂಡರು ಬುದ್ಧಿ ಹೇಳಬೇಕು. ದೇಶದ 139 ಕೋಟಿ ಜನರೂ ಭಾರತ ಮಾತೆಯ ಮಕ್ಕಳು. ಇದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ’ ಎಂದೂ ಭಾಗವತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ‘ಕೋವಿಡ್–19 ಪಿಡುಗಿನ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಡಬೇಕು. ಜೊತೆಗೆ, ಭಾರತ ವಿರೋಧಿ ಶಕ್ತಿಗಳು ಈ ಪರಿಸ್ಥಿತಿಯ ಲಾಭ ಪಡೆಯಲು ಹವಣಿಸುತ್ತಿರುವ ಬಗ್ಗೆ ಜನರು ಎಚ್ಚರದಿಂದ ಇರಬೇಕು’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.</p>.<p>ನಾಗಪುರದಲ್ಲಿರುವ ಸಂಘಟನೆಯ ಕೇಂದ್ರ ಕಚೇರಿಯಿಂದ ವೆಬ್ಕ್ಯಾಸ್ಟ್ ಮೂಲಕ ಮಾತನಾಡಿದ ಅವರು, ‘ಪ್ರಚೋದಿಸುವವರ ಸಂಖ್ಯೆಗೇನೂ ಕೊರತೆ ಇಲ್ಲ. ಇದು ಆಕ್ರೋಶ, ಆವೇಶಕ್ಕೆ ಕಾರಣವಾಗುತ್ತದೆ. ಅದರಿಂದ ಅಚಾತುರ್ಯಗಳು ನಡೆಯುತ್ತವೆ. ಇಂತಹ ಅವಕಾಶಗಳಿಗೆ ಕಾಯುತ್ತಿರುವವರು ಪರಿಸ್ಥಿತಿಯ ಲಾಭ ಪಡೆಯುತ್ತಾರೆ’ ಎಂದರು.</p>.<p>ಪಾಲ್ಘರ್ನಲ್ಲಿ ಇತ್ತೀಚೆಗೆ ಇಬ್ಬರು ಸಾಧುಗಳನ್ನು ಹತ್ಯೆ ಮಾಡಿದ ಘಟನೆಯನ್ನು ಪ್ರಸ್ತಾಪಿಸಿದ ಅವರು, ‘ಈ ಘಟನೆ ಬಗ್ಗೆ ಹಲವಾರು ಜನರು ಮಾತನಾಡುತ್ತಿದ್ದಾರೆ. ಇಂಥ ಘಟನೆ ಘಟಿಸಬೇಕಿತ್ತು ಎಂದೆನಿಸುತ್ತದೆಯೇ? ಆ ಘಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಪೊಲಿಸರು ಏನು ಮಾಡುತ್ತಿದ್ದರು’ ಎಂದು ಪ್ರಶ್ನಿಸಿದರು.</p>.<p>‘ಭಾರತ ನಿನ್ನನ್ನು ತುಂಡು ಮಾಡುತ್ತೇವೆ ಎಂದು ಹೇಳುತ್ತಿರುವ ವ್ಯಕ್ತಿಗಳು ಜನರನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ. ಇಂಥ ಜನರಿಗೆ ಸಮುದಾಯದ ಮುಖಂಡರು ಬುದ್ಧಿ ಹೇಳಬೇಕು. ದೇಶದ 139 ಕೋಟಿ ಜನರೂ ಭಾರತ ಮಾತೆಯ ಮಕ್ಕಳು. ಇದನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು ’ ಎಂದೂ ಭಾಗವತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>