ಎಂಟು ಸೆಕೆಂಡ್ಗಳ ಈ ವಿಡಿಯೊವನ್ನು ಕಾಶ್ಮೀರ ಪ್ರವಾಸೋದ್ಯಮ ಇಲಾಖೆಯ ಮಾಜಿ ನಿರ್ದೇಶಕ ಮೆಹಮೂದ್ ಶಹಾ ಟ್ವಿಟರ್ನಲ್ಲಿ ಹಂಚಿಕೊಂಡಿದ್ದರು. ಗ್ರಾಮಸ್ಥರು ಅಟ್ಟಾಡಿಸಿಕೊಂಡು ಬರುವಾಗ ಕರಡಿಯು ಕಡಿದಾದ ಬೆಟ್ಟ ಹತ್ತಲು ಪ್ರಯತ್ನಿಸುತ್ತದೆ. ಈ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ. ನಿಯಂತ್ರಣ ತಪ್ಪಿದ ಕರಡಿ ನದಿಗೆ ಉರುತ್ತಿರುವ ದೃಶ್ಯ ವಿಡಿಯೊದಲ್ಲಿ ದಾಖಲಾಗಿದೆ. ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಗ್ರಾಮಸ್ಥರ ನಡೆಗೆ ಟೀಕೆ ವ್ಯಕ್ತವಾಗಿತ್ತು.