ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ರಾಹುಲ್, ಚುನಾವಣೆಗೂ ಮುನ್ನ ಸಿಪಿಎಂ ವಿರುದ್ಧ ವಾಗ್ದಾಳಿ ನಡೆಸದಿರಲು ತೀರ್ಮಾನಿಸಿದ್ದರು. ಕಾಂಗ್ರೆಸ್ನ ಹೋರಾಟ ಬಿಜೆಪಿ ವಿರುದ್ಧವಾಗಿದ್ದುದರಿಂದ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿರುದ್ಧ ಮಾತ್ರ ವಾಗ್ದಾಳಿ ನಡೆಸಿದ್ದರು. ಈಗ ಪಶ್ಚಿಮ ಬಂಗಾಳದಲ್ಲಿ ಅದೇ ನೀತಿ ಅನು
ಸರಿಸಲು ಸಿಪಿಎಂ ಮುಂದಾಗಿದೆ. ಅಲ್ಲಿ ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ವಿರುದ್ಧ ಮಾತ್ರ ವಾಗ್ದಾಳಿ ನಡೆಸಲು ಸಿಪಿಎಂ ನಿರ್ಧರಿಸಿದೆ.