ವೈದ್ಯರ ಕುರಿತ ತಮ್ಮ ನಿಲುವನ್ನು ಶನಿವಾರ ಬದಲಿಸಿಕೊಂಡಿದ್ದ ಮಮತಾ ಬ್ಯಾನರ್ಜಿ, ‘ವೈದ್ಯರ ಪ್ರಮುಖ ಬೇಡಿಕೆಗಳನ್ನು ಈಡೇರಿಸುತ್ತೇವೆ. ಅವರ ವಿರುದ್ಧ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ (ಎಸ್ಮಾ) ಜಾರಿಗೊಳಿಸುವುದಿಲ್ಲ. ಎಲ್ಲರೂ ಸೇವೆಗೆ ಮರಳಬೇಕು. ವೈದ್ಯರು ಕರ್ತವ್ಯಕ್ಕೆ ಹಾಜರಾಗುವಂತೆ ಮಾಡಲು ಸರ್ಕಾರಕ್ಕೆ ಸಾಧ್ಯವಿದೆ. ಆದರೂ ಸರ್ಕಾರಒತ್ತಾಯಪೂರ್ವಕವಾಗಿ ಅದನ್ನು ಸಾಧಿಸುವುದಿಲ್ಲ’ ಎಂದು ಹೇಳಿದ್ದರು.