ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶಾಖಪಟ್ಟಣ | ಅನಿಲ ಸೋರಿಕೆ: ಇಬ್ಬರ ಸಾವು

Last Updated 30 ಜೂನ್ 2020, 14:25 IST
ಅಕ್ಷರ ಗಾತ್ರ

ವಿಶಾಖಪಟ್ಟಣ: ಇಲ್ಲಿಗೆ ಸಮೀಪದ ಪರವಾಡದಲ್ಲಿನ ಔಷಧ ತಯಾರಿಕಾ ಕಂಪನಿಯಲ್ಲಿ ‘ಬೆಂಜಿನ್‌’ ಅನಿಲ ಸೋರಿಕೆಯಿಂದ ಇಬ್ಬರು ಮೃತಪಟ್ಟಿದ್ದು, ನಾಲ್ವರು ಅಸ್ವಸ್ಥರಾಗಿದ್ದಾರೆ.

ಸೈನರ್‌ ಲೈಫ್‌ ಸೈನ್ಸಸ್‌ ಕಂಪನಿಯ ಒಂದು ಘಟಕದಲ್ಲಿ ಮಂಗಳವಾರ ಬೆಳಿಗ್ಗೆ ಸೋರಿಕೆ ಆಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಡೀ ಘಟಕವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಅವರು ಜಿಲ್ಲಾಧಿಕಾರಿ ವಿ. ವಿನಯ್‌ ಚಾಂದ್‌ ಅವರಿಂದ ಮಾಹಿತಿ ಪಡೆದಿದ್ದಾರೆ. ಅಗತ್ಯವಿರುವವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅವರು ಸೂಚಿಸಿದ್ದು, ಘಟನೆಯ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಅಸ್ವಸ್ಥಗೊಂಡ ಹಿರಿಯ ಉದ್ಯೋಗಿಗಳನ್ನು ಸಮೀಪದ ಗಾಜುವಾಕದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ತಿಂಗಳ ಹಿಂದಷ್ಟೇ ಅನಿಲ ಸೋರಿಕೆಯಿಂದಾಗಿ 12 ಮಂದಿ ಮೃತಪ‍ಟ್ಟು, ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು.ಕೆಲವು ವರ್ಷಗಳ ಹಿಂದೆ ಇದೇ ಕಂಪನಿ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT