<p><strong>ವಿಶಾಖಪಟ್ಟಣ</strong>: ಇಲ್ಲಿಗೆ ಸಮೀಪದ ಪರವಾಡದಲ್ಲಿನ ಔಷಧ ತಯಾರಿಕಾ ಕಂಪನಿಯಲ್ಲಿ ‘ಬೆಂಜಿನ್’ ಅನಿಲ ಸೋರಿಕೆಯಿಂದ ಇಬ್ಬರು ಮೃತಪಟ್ಟಿದ್ದು, ನಾಲ್ವರು ಅಸ್ವಸ್ಥರಾಗಿದ್ದಾರೆ.</p>.<p>ಸೈನರ್ ಲೈಫ್ ಸೈನ್ಸಸ್ ಕಂಪನಿಯ ಒಂದು ಘಟಕದಲ್ಲಿ ಮಂಗಳವಾರ ಬೆಳಿಗ್ಗೆ ಸೋರಿಕೆ ಆಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಡೀ ಘಟಕವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನೆಯ ಬಗ್ಗೆ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರು ಜಿಲ್ಲಾಧಿಕಾರಿ ವಿ. ವಿನಯ್ ಚಾಂದ್ ಅವರಿಂದ ಮಾಹಿತಿ ಪಡೆದಿದ್ದಾರೆ. ಅಗತ್ಯವಿರುವವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅವರು ಸೂಚಿಸಿದ್ದು, ಘಟನೆಯ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಅಸ್ವಸ್ಥಗೊಂಡ ಹಿರಿಯ ಉದ್ಯೋಗಿಗಳನ್ನು ಸಮೀಪದ ಗಾಜುವಾಕದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಎರಡು ತಿಂಗಳ ಹಿಂದಷ್ಟೇ ಅನಿಲ ಸೋರಿಕೆಯಿಂದಾಗಿ 12 ಮಂದಿ ಮೃತಪಟ್ಟು, ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು.ಕೆಲವು ವರ್ಷಗಳ ಹಿಂದೆ ಇದೇ ಕಂಪನಿ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶಾಖಪಟ್ಟಣ</strong>: ಇಲ್ಲಿಗೆ ಸಮೀಪದ ಪರವಾಡದಲ್ಲಿನ ಔಷಧ ತಯಾರಿಕಾ ಕಂಪನಿಯಲ್ಲಿ ‘ಬೆಂಜಿನ್’ ಅನಿಲ ಸೋರಿಕೆಯಿಂದ ಇಬ್ಬರು ಮೃತಪಟ್ಟಿದ್ದು, ನಾಲ್ವರು ಅಸ್ವಸ್ಥರಾಗಿದ್ದಾರೆ.</p>.<p>ಸೈನರ್ ಲೈಫ್ ಸೈನ್ಸಸ್ ಕಂಪನಿಯ ಒಂದು ಘಟಕದಲ್ಲಿ ಮಂಗಳವಾರ ಬೆಳಿಗ್ಗೆ ಸೋರಿಕೆ ಆಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಡೀ ಘಟಕವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಘಟನೆಯ ಬಗ್ಗೆ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರು ಜಿಲ್ಲಾಧಿಕಾರಿ ವಿ. ವಿನಯ್ ಚಾಂದ್ ಅವರಿಂದ ಮಾಹಿತಿ ಪಡೆದಿದ್ದಾರೆ. ಅಗತ್ಯವಿರುವವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅವರು ಸೂಚಿಸಿದ್ದು, ಘಟನೆಯ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ. ಅಸ್ವಸ್ಥಗೊಂಡ ಹಿರಿಯ ಉದ್ಯೋಗಿಗಳನ್ನು ಸಮೀಪದ ಗಾಜುವಾಕದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಎರಡು ತಿಂಗಳ ಹಿಂದಷ್ಟೇ ಅನಿಲ ಸೋರಿಕೆಯಿಂದಾಗಿ 12 ಮಂದಿ ಮೃತಪಟ್ಟು, ಸಾವಿರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು.ಕೆಲವು ವರ್ಷಗಳ ಹಿಂದೆ ಇದೇ ಕಂಪನಿ ಘಟಕದಲ್ಲಿ ಅನಿಲ ಸೋರಿಕೆಯಿಂದಾಗಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>