‘ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು ಎಂಬುದು ಬಿಜೆಪಿಯ ಧ್ಯೇಯವಾಗಿದ್ದು, ಪಕ್ಷದಲ್ಲಿ ತ್ಯಾಗ, ಬಲಿದಾನಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸ್ವಾರ್ಥ, ಸ್ವಜನ ಪಕ್ಷಪಾತದಿಂದ ಪಕ್ಷ ದೂರ ಇದೆ. ಜನಪರ ಮತ್ತು ಜನಹಿತ ರಾಜಕಾರಣಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ಕಾಂಗ್ರೆಸ್ ಸ್ವಂತ ಲಾಭಕ್ಕಾಗಿ ಹಾಗೂ ಅಧಿಕಾರ ಕೇಂದ್ರಿಕರಣಕ್ಕೆ ಪ್ರಾಶಸ್ತ್ಯ ನೀಡಿ, ದೇಶ ಒಡೆಯುವ ರಾಜಕಾರಣ ಮಾಡುತ್ತಿದೆ’ ಎಂದು ಹೇಳಿದರು.