ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

Last Updated 14 ಜನವರಿ 2020, 11:09 IST
ಅಕ್ಷರ ಗಾತ್ರ

ನವದೆಹಲಿ: ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಬಂಧಿತರಾದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಅವರ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಪೊಲೀಸರನ್ನು ದೆಹಲಿ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಪ್ರತಿಭಟಿಸುವುದು ಸಂವಿಧಾನಿಕ ಹಕ್ಕು ಎಂದಿರುವ ನ್ಯಾಯಾಲಯವು, ‘ಸಂಸತ್‌ನಲ್ಲಿ ಏನು ಹೇಳಬೇಕಿತ್ತೋ ಅದನ್ನು ಹೇಳದೇ ಇರುವುದರಿಂದ ಜನರು ರಸ್ತೆಗಳಿದು ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದೆ.

ದೆಹಲಿಯ ಜಾಮಾ ಮಸೀದಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಚಂದ್ರಶೇಖರ್‌ ಆಜಾದ್‌ ಅವರನ್ನು ಬಂಧಿಸಿದ ಪೊಲೀಸರನ್ನು ಪ್ರಶ್ನಿಸಿರುವ ನ್ಯಾಯಾಲಯವು, ‘ದೆಹಲಿಯಲ್ಲಿರುವ ಜಾಮಾ ಮಸೀದಿ ಪಾಕಿಸ್ತಾನದಲ್ಲಿ ಇದೆ ಎನ್ನುವಂತೆ ನೀವು ವರ್ತಿಸುತ್ತಿದ್ದೀರಿ. ಅದು ಪಾಕಿಸ್ತಾನದಲ್ಲಿದ್ದರೂ ನೀವು ಅಲ್ಲಿಗೆ ಹೋಗಿ ಪ್ರತಿಭಟಿಸಬಹುದು. ಪಾಕಿಸ್ತಾನ ಅವಿಭಜಿತ ಭಾರತದ ಒಂದು ಭಾಗವಾಗಿತ್ತು. ಜಾಮಾ ಮಸೀದಿ ಆವರಣದಲ್ಲಿ ಜನರು ಧರಣಿ ಮಾಡುವುದರಲ್ಲಿ ತಪ್ಪೇನಿದೆ’ ಎಂದು ಕೇಳಿದೆ.

ಕಳೆದ ತಿಂಗಳು ಜಾಮಾ ಮಸೀದಿ ಆವರಣದಲ್ಲಿ ನಡೆದ ಪ್ರತಿಭಟನೆ ವೇಳೆ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT