ದೆಹಲಿಯ ಜಾಮಾ ಮಸೀದಿ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಚಂದ್ರಶೇಖರ್ ಆಜಾದ್ ಅವರನ್ನು ಬಂಧಿಸಿದ ಪೊಲೀಸರನ್ನು ಪ್ರಶ್ನಿಸಿರುವ ನ್ಯಾಯಾಲಯವು, ‘ದೆಹಲಿಯಲ್ಲಿರುವ ಜಾಮಾ ಮಸೀದಿ ಪಾಕಿಸ್ತಾನದಲ್ಲಿ ಇದೆ ಎನ್ನುವಂತೆ ನೀವು ವರ್ತಿಸುತ್ತಿದ್ದೀರಿ. ಅದು ಪಾಕಿಸ್ತಾನದಲ್ಲಿದ್ದರೂ ನೀವು ಅಲ್ಲಿಗೆ ಹೋಗಿ ಪ್ರತಿಭಟಿಸಬಹುದು. ಪಾಕಿಸ್ತಾನ ಅವಿಭಜಿತ ಭಾರತದ ಒಂದು ಭಾಗವಾಗಿತ್ತು. ಜಾಮಾ ಮಸೀದಿ ಆವರಣದಲ್ಲಿ ಜನರು ಧರಣಿ ಮಾಡುವುದರಲ್ಲಿ ತಪ್ಪೇನಿದೆ’ ಎಂದು ಕೇಳಿದೆ.