ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ, ಸಾವು ಸಂಭವಿಸಿದರೆ ₹4 ಲಕ್ಷ ಪರಿಹಾರ

Last Updated 16 ಮಾರ್ಚ್ 2020, 9:51 IST
ಅಕ್ಷರ ಗಾತ್ರ

ಪಾಟ್ನಾ: ಕೊರೊನಾ ವೈರಸ್‌ ಸೋಂಕಿತರ ಚಿಕಿತ್ಸೆಯನ್ನು ಸರ್ಕಾರವೇ ಭರಿಸಲಿದ್ದು, ಸೋಂಕಿನಿಂದ ಸಾವು ಸಂಭವಿಸಿದರೆ 4 ಲಕ್ಷ ಪರಿಹಾರ ನೀಡಲಾಗುವುದು ಎಂದು ಬಿಹಾರ ಸರ್ಕಾರ ಘೋಷಿಸಿದೆ.

ಇಂದು ನಡೆದ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಈ ವಿಷಯ ತಿಳಿಸಿದರು.
’ಕೊರೊನಾ ವೈರಸ್‌ ಸೋಂಕಿಗೆ ಗುರಿಯಾಗುವವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ‘ಮುಖ್ಯಮಂತ್ರಿ ಚಿಕಿತ್ಸಾ ಸಹಾಯತಾ ಕೋಶ್‌ ಯೋಜನೆ’ಯ ಮೂಲಕ ಭರಿಸಲಿದೆ. ಒಂದು ವೇಳೆ ಈ ಕಾಯಿಲೆಯಿಂದ ಯಾವುದೇ ವ್ಯಕ್ತಿ ಮೃತಪಟ್ಟಿರೆ ಅವರ ಕುಟುಂಬಸ್ಥರಿಗೆ ‘ಮುಖ್ಯಮಂತ್ರಿ ಪರಿಹಾರ ನಿಧಿ’ಯಿಂದ ₹4 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಮೊದಲ ರಾಜ್ಯ ಬಿಹಾರವಾಗಿದೆ. ದೇಶದಲ್ಲಿ ಇದುವರೆಗೆ ಕೊರೊನಾ ವೈರಸ್‌ನಿಂದ ಇಬ್ಬರು ಸಾವಿಗೀಡಾಗಿದ್ದಾರೆ. ಅದರಲ್ಲಿ ಒಬ್ಬರು ಕರ್ನಾಟಕದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT