ಪಟ್ನಾ:ಭೀಕರಪ್ರವಾಹಕ್ಕೆ ತುತ್ತಾಗಿರುವ ಬಿಹಾರದಲ್ಲಿ ಪರಿಸ್ಥಿತಿ ಅವಲೋಕಿಸಲು ತೆರಳಿದ ಸಂಸದರೇ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಬಿಜೆಪಿ ಸಂಸದ ರಾಮ ಕೃಪಾಳ್ ಯಾದವ್ ಅವರು ಪ್ರವಾಹಪೀಡಿತ ಪಟ್ನಾದ ಮಸೌರಿಗೆ ಪರಿಸ್ಥಿತಿ ಅವಲೋಕಿಸಲು ಬುಧವಾರ ತೆರಳಿದ್ದರು. ಈ ವೇಳೆ ಚಿಕ್ಕ ತೆಪ್ಪವೊಂದರಲ್ಲಿ ಅವರನ್ನು ಕರೆದೊಯ್ಯಲಾಗಿತ್ತು. ಸಮೀಕ್ಷೆ ನಡೆಸಿ ದಡದತ್ತ ವಾಪಸಾಗುತ್ತಿದ್ದ ವೇಳೆ ಸಂಸದರಿದ್ದ ತೆಪ್ಪ ನೀರಿನಲ್ಲಿ ಮುಳುಗಿದೆ. ಈ ವೇಳೆ ಸಂಸದರೂ ಆಯ ತಪ್ಪಿ ಬಿದ್ದಿದ್ದಾರೆ. ತಕ್ಷಣವೇ ಸ್ಥಳೀಯರು ಅವರನ್ನು ರಕ್ಷಿಸಿದ್ದಾರೆ.
ಭಾರೀ ಮಳೆಯಿಂದಾಗಿ ಬಿಹಾರದಾದ್ಯಂತ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಪಟ್ನಾದ ಬಹುತೇಕ ಪ್ರದೇಶಗಳು ಮುಳುಗಡೆಯಾಗಿದ್ದವು. ಭಾರೀ ಮಳೆ, ಪ್ರವಾಹದಿಂದ ಬಿಹಾರ, ಉತ್ತರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಲ್ಲಿ 110ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.