ಉತ್ತರ ಪ್ರದೇಶ ವಿಧಾನಸಭೆಗೆ ಕಳೆದ ಬಾರಿ ನಡೆದ ಉಪಚುನಾವಣೆಯಲ್ಲಿ ನಿಷಾದ ಪಾರ್ಟಿಯು ಸಮಾಜವಾದಿ ಪಕ್ಷವನ್ನು ಬೆಂಬಲಿಸಿತ್ತು. ಆ ಪಕ್ಷದ ಅಭ್ಯರ್ಥಿ ಪ್ರವೀಣ್ ನಿಷಾದ್, ಮುಖ್ಯಮಂತ್ರಿ ಆದಿತ್ಯನಾಥ ಅವರ ತವರು ಗೋರಖ್ಪುರದಲ್ಲಿ ಬಿಜೆಪಿಯ ಅಭ್ಯರ್ಥಿಗೆ ಸೋಲಿನ ಕಹಿ ಉಣಿಸಿದ್ದರು. ಈ ಬಾರಿಯೂ ಸಮಾಜವಾದಿ ಪಕ್ಷ ಆ ಕ್ಷೇತ್ರದಿಂದ ಪ್ರವೀಣ್ಗೆ ಟಿಕೆಟ್ ನೀಡುವುದು ನಿರೀಕ್ಷಿತವಾಗಿತ್ತು. ಅದರಂತೆ, ಮೂರು ದಿನಗಳ ಹಿಂದೆಯಷ್ಟೇ ನಿಷಾದ್ ಪಾರ್ಟಿ ಎಸ್ಪಿಗೆ ಬೆಂಬಲವನ್ನೂ ಸೂಚಿಸಿತ್ತು.