ಬಿಜೆಪಿ ನಾಯಕರು, ಅವರ ಆಪ್ತರ ವಿರುದ್ಧ ಇದ್ದ ಎಲ್ಲ ಪ್ರಕರಣಗಳನ್ನು ಖುಲಾಸೆಗೊಳ್ಳುತ್ತಿವೆ. ವಿರೋಧಿಗಳ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ ಎಂದೂ ದೂರಿದ ಅವರು, ‘ಇತ್ತೀಚೆಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹಾಗೂ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇದೀಗ ತೃಣಮೂಲಕ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ಸೇಡಿನ ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ನಡುವಣ ಸಾಮರಸ್ಯ ನಾಶವಾಗಿದೆ. ಎಲ್ಲ ವಿರೋಧ ಪಕ್ಷಗಳ ನಾಯಕರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲು ಬಿಜೆಪಿ ಉತ್ಸುಕವಾಗಿದೆ’ ಎಂದು ಹರಿಹಾಯ್ದರು.