<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿ ದೆಹಲಿಯ ಗದ್ದುಗೆ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ತನ್ನ 240 ಸಂಸದರನ್ನು ಚುನಾವಣೆ ಪ್ರಚಾರ ಕಣಕ್ಕೆ ನಿಯೋಜಿಸಿದೆ.</p>.<p>ದೆಹಲಿ ವಿಧಾನಸಭೆ ಚುನಾವಣೆ ಫೆ. 8ರಂದು ನಡೆಯಲಿದ್ದು, ಫೆ. 6ರಂದು ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಮೂರು ದಿನಗಳಲ್ಲಿ ಪ್ರಚಾರದ ಕಾವು ಹೆಚ್ಚಿಸಲು ನಿರ್ಧರಿಸಿರುವ ಬಿಜೆಪಿ ಒಟ್ಟು 240 ಸಂಸದರನ್ನು ದೆಹಲಿಗೆ ನಿಯೋಜಿಸಿದ್ದು, ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದೆ.</p>.<p>ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಪ್ರಚಾರಕ್ಕೆ ಕಳುಹಿಸುವ ನಿರ್ಧಾರವನ್ನು ಪಕ್ಷದ ಸಂಸದೀಯ ಸಭೆಯಲ್ಲೇ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಈ ಸಭೆಯ ನೇತೃತ್ವ ವಹಿಸಿದ್ದರು.</p>.<p>ದೆಹಲಿಯ ಪ್ರತಿ ಗಲ್ಲಿಗಳಲ್ಲಿಯೂ, ಅದರಲ್ಲಿಯೂ ಬಡ ವರ್ಗದವರು ಹೆಚ್ಚಿರುವ ಪ್ರದೇಶಗಳನ್ನು ಕೇಂದ್ರೀಕರಿಸಿ ಪ್ರಚಾರ ನಡೆಸುವಂತೆ ಸಂಸದರಿಗೆ ಸೂಚಿಸಲಾಗಿದೆ ಎಂದು ಪಕ್ಷದ ಅಧ್ಯಕ್ಷ ನಡ್ಡಾ ತಿಳಿಸಿದ್ದಾರೆ. ಅಲ್ಲದೆ, ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವನ್ನು ನಡ್ಡಾ ವ್ಯಕ್ತಪಡಿಸಿದ್ದಾರೆ. </p>.<p>ದೆಹಲಿಯ ಬಡ ವರ್ಗವು ಅರವಿಂದ ಕೇಜ್ರಿವಾಲ್ ಅವರ ಎಎಪಿಯೊಂದಿಗೆ ಹೆಚ್ಚು ಗುರುತಿಸಿಕೊಂಡಿದೆ. ಈ ಮತ ಬ್ಯಾಂಕ್ ಮುರಿಯಲೆಂದೇ ಬಿಜೆಪಿ ತನ್ನ ಸಂಸದರನ್ನು ಕಣಕ್ಕಿಳಿಸಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಷ್ಟ್ರ ರಾಜಧಾನಿ ದೆಹಲಿಯ ಗದ್ದುಗೆ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ತನ್ನ 240 ಸಂಸದರನ್ನು ಚುನಾವಣೆ ಪ್ರಚಾರ ಕಣಕ್ಕೆ ನಿಯೋಜಿಸಿದೆ.</p>.<p>ದೆಹಲಿ ವಿಧಾನಸಭೆ ಚುನಾವಣೆ ಫೆ. 8ರಂದು ನಡೆಯಲಿದ್ದು, ಫೆ. 6ರಂದು ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಈ ಮೂರು ದಿನಗಳಲ್ಲಿ ಪ್ರಚಾರದ ಕಾವು ಹೆಚ್ಚಿಸಲು ನಿರ್ಧರಿಸಿರುವ ಬಿಜೆಪಿ ಒಟ್ಟು 240 ಸಂಸದರನ್ನು ದೆಹಲಿಗೆ ನಿಯೋಜಿಸಿದ್ದು, ಪಕ್ಷದ ಪರ ಪ್ರಚಾರದಲ್ಲಿ ತೊಡಗಿಸಿಕೊಳ್ಳುವಂತೆ ಸೂಚಿಸಿದೆ.</p>.<p>ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಪ್ರಚಾರಕ್ಕೆ ಕಳುಹಿಸುವ ನಿರ್ಧಾರವನ್ನು ಪಕ್ಷದ ಸಂಸದೀಯ ಸಭೆಯಲ್ಲೇ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಈ ಸಭೆಯ ನೇತೃತ್ವ ವಹಿಸಿದ್ದರು.</p>.<p>ದೆಹಲಿಯ ಪ್ರತಿ ಗಲ್ಲಿಗಳಲ್ಲಿಯೂ, ಅದರಲ್ಲಿಯೂ ಬಡ ವರ್ಗದವರು ಹೆಚ್ಚಿರುವ ಪ್ರದೇಶಗಳನ್ನು ಕೇಂದ್ರೀಕರಿಸಿ ಪ್ರಚಾರ ನಡೆಸುವಂತೆ ಸಂಸದರಿಗೆ ಸೂಚಿಸಲಾಗಿದೆ ಎಂದು ಪಕ್ಷದ ಅಧ್ಯಕ್ಷ ನಡ್ಡಾ ತಿಳಿಸಿದ್ದಾರೆ. ಅಲ್ಲದೆ, ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವನ್ನು ನಡ್ಡಾ ವ್ಯಕ್ತಪಡಿಸಿದ್ದಾರೆ. </p>.<p>ದೆಹಲಿಯ ಬಡ ವರ್ಗವು ಅರವಿಂದ ಕೇಜ್ರಿವಾಲ್ ಅವರ ಎಎಪಿಯೊಂದಿಗೆ ಹೆಚ್ಚು ಗುರುತಿಸಿಕೊಂಡಿದೆ. ಈ ಮತ ಬ್ಯಾಂಕ್ ಮುರಿಯಲೆಂದೇ ಬಿಜೆಪಿ ತನ್ನ ಸಂಸದರನ್ನು ಕಣಕ್ಕಿಳಿಸಿದೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>