ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿ ಶಾಸಕರಿಗೆ ಬಿಜೆಪಿ ಆಮಿಷ: ಮನೀಶ್‌ ಸಿಸೋಡಿಯ ಆರೋಪ

Last Updated 1 ಮೇ 2019, 20:15 IST
ಅಕ್ಷರ ಗಾತ್ರ

ನವದೆಹಲಿ: ‘ಬಿಜೆಪಿಯು ಶಾಸಕರ ಖರೀದಿಯಲ್ಲಿ ತೊಡಗಿದ್ದು, ನಮ್ಮ ಪಕ್ಷದ ಏಳು ಮಂದಿ ಶಾಸಕರಿಗೆ ತಲಾ ₹ 10 ಕೋಟಿಯ ಆಮಿಷ ಒಡ್ಡಿದೆ’ ಎಂದು ಎಎಪಿ ಮುಖಂಡ, ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯ ಬುಧವಾರ ಆರೋಪಿಸಿದ್ದಾರೆ.

‘ಅಭಿವೃದ್ಧಿಯ ವಿಚಾರದಲ್ಲಿ ಜನರ ಮುಂದೆ ಹೇಳಿಕೊಳ್ಳಲು ಬಿಜೆಪಿಗೆ ವಿಷಯಗಳಿಲ್ಲದಿರುವುದರಿಂದ ಆ ಪಕ್ಷವು ಶಾಸಕರ ಖರೀದಿಗೆ ಕೈಹಾಕಿದೆ. ಈ ಹಿಂದೆಯೂ ಬಿಜೆಪಿ ಇಂಥ ಪ್ರಯತ್ನ ಮಾಡಿತ್ತು. ಆದರೆ ಆಗ ಜನರೇ ಆ ಪಕ್ಷಕ್ಕೆ ಸರಿಯಾದ ಉತ್ತರ ಕೊಟ್ಟಿದ್ದರು. ದೆಹಲಿಯ ಜನರು ಈ ಬಾರಿಯೂ ತಕ್ಕ ಉತ್ತರ ನೀಡಲಿದ್ದಾರೆ’ ಎಂದು ಹೇಳಿದರು.

‘ಸಿಸೋಡಿಯ ಅವರ ಆರೋಪವು ವಿಲಕ್ಷಣವಾದುದು ಮತ್ತು ಜನರ ಗಮನವನ್ನು ಸೆಳೆಯಲು ಮಾಡಿದ ವ್ಯರ್ಥ ಪ್ರಯತ್ನ’ ಎಂದು ಬಿಜೆಪಿ ಮುಖಂಡ ಅಶೋಕ್‌ ಗೋಯಲ್‌ ಬಣ್ಣಿಸಿದ್ದಾರೆ.

ಪಕ್ಷದೊಳಗೆ ಎದ್ದಿರುವ ಭಿನ್ನಮತವನ್ನು ನಿಯಂತ್ರಿಸಲು ಅರವಿಂದ ಕೇಜ್ರಿವಾಲ್‌ ಅವರಿಗೆ ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT