‘ಬಿಹಾರದ ಯಾವೊಬ್ಬ ಕೇಂದ್ರ ಸಚಿವರಿಗೂ ಕ್ಷೇತ್ರ ಬದಲಾವಣೆ ಆಗದಿರುವಾಗ, ನನ್ನ ಕ್ಷೇತ್ರವನ್ನು ಮಾತ್ರ ಏಕೆ ಬದಲಿಸಲಾಗಿದೆ’ ಎಂದು ಗಿರಿರಾಜ್ ಪ್ರಶ್ನಿಸಿದ್ದಾರೆ.ನವಾದಾ ಕ್ಷೇತ್ರ ಪ್ರತಿನಿಧಿಸುತ್ತಿರುವ ಅವರಿಗೆ ಬೇಗುಸರಾಯ್ ಟಿಕೆಟ್ ನೀಡಲಾಗಿದೆ. ದೆಹಲಿಯಲ್ಲಿ ಬೀಡುಬಿಟ್ಟಿರುವ ಅವರು, ಕ್ಷೇತ್ರ ಬದಲಾವಣೆಗೆ ಕಾರಣರಾಗಿರುವ ಪಕ್ಷದ ಇಬ್ಬರು ಮುಖಂಡರ ವಿರುದ್ಧ ವರಿಷ್ಠರಿಗೆ ದೂರು ನೀಡಿದ್ದಾರೆ. ಆದರೆ ಗಿರಿರಾಜ್ ಮನವೊಲಿಸುವ ಜವಾಬ್ದಾರಿಯನ್ನು ಪಕ್ಷದ ಐವರು ಹಿರಿಯ ಮುಖಂಡರಿಗೆ ವಹಿಸಲಾಗಿದೆ.