ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲ್ಕತ್ತ: ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ರ‍್ಯಾಲಿ ವೇಳೆ ಲಾಠಿ ಪ್ರಹಾರ 

Last Updated 12 ಜೂನ್ 2019, 10:03 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಪೊಲೀಸರ ಪ್ರಧಾನ ಕಾರ್ಯಾಲಯ ಲಾಲ್‌ಬಜಾರ್‌ಗೆ ಪ್ರತಿಭಟನಾ ರ‍್ಯಾಲಿ ನಡೆಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಪ್ರತಿಭಟನಾ ಮೆರವಣಿಗೆ ನಡೆಸಬೇಡಿ ಎಂದು ಪೊಲೀಸರು ಪದೇ ಪದೇ ಹೇಳಿದ್ದರೂ ಅದನ್ನು ಲೆಕ್ಕಿಸದೆ ಬಿಜೆಪಿ ಕಾರ್ಯಕರ್ತರು ಮುನ್ನುಗ್ಗಿದಾಗ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಅಶ್ರುವಾಯು ಮತ್ತು ಜಲಫಿರಂಗಿ ಬಳಸಿ ಗುಂಪನ್ನು ಚದುರಿಸಿದ್ದಾರೆ.

ಶನಿವಾರ ಬಶೀರ್‌ಹತ್‌ನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು ಹತ್ಯೆಗೀಡಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಹಲವಾರು ಕಾರ್ಯಕರ್ತರು ಹತ್ಯೆಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಿದೆ. ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಈ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ.

ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ಸರ್ಕಾರದ ನಡುವಿನ ಜಟಾಪಟಿ ಇದೀಗ ಮತ್ತಷ್ಟು ಬಿಗಡಾಯಿಸಿದ್ದು, ಬಿಜೆಪಿ ಕಾರ್ಯಕರ್ತರ ಪ್ರತಿಭಟನಾ ಮೆರವಣಿಗೆಗೆ ತಡೆಯೊಡ್ಡಲು ಬೆಳಗ್ಗಿನಿಂದಲೇ ಪೊಲೀಸರು ಸಜ್ಜಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT