ಪಣಜಿ: ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಹಾಗೂ ಇಬ್ಬರು ಇಬ್ಬರು ಶಾಸಕರ ಅನಾರೋಗ್ಯ ಗಂಭೀರ ಸ್ವರೂಪದ್ದಲ್ಲ ಎಂದು ಗೋವಾ ಬಿಜೆಪಿ ಅಧ್ಯಕ್ಷ ವಿನಯ್ ತೆಂಡೂಲ್ಕರ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕಮೈತ್ರಿಪಕ್ಷ ಎಂಜಿಪಿ ಆರೋಪವನ್ನು ಅವರು ತಳ್ಳಿಹಾಕಿದ್ದಾರೆ.
ಮುಖ್ಯಮಂತ್ರಿ ಹಾಗೂ ಶಾಸಕರಾದ ಫ್ರಾನ್ಸಿಸ್ ಡಿಸೋಜಾ, ಪಾಂಡುರಂಗ ಅವರು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಇಬ್ಬರೂ ಶಾಸಕರು ಕಾಂಗ್ರೆಸ್ ತೊರೆದು ಇತ್ತೀಚೆಗೆ ಬಿಜೆಪಿ ಸೇರಿದ್ದರು.